ಡಿಸಿಎಂ ಲಕ್ಷ್ಮಣ್ ಸವದಿಗೆ 'ಗುಡ್ ನ್ಯೂಸ್' : ಉಪಮುಖ್ಯಮಂತ್ರಿಯಾಗಿ ಮುಂದುವರೆಸುವುದಾಗಿ ಹೈಕಮಾಂಡ್ ಅಭಯ
ಬೆಂಗಳೂರು : ಡಿಸಿಎಂ ಲಕ್ಷ್ಮಣ್ ಸವದಿ ಅವರಿಗೆ ಬಿಜೆಪಿ ಹೈಕಮಾಂಡ್ ಸಿಹಿಸುದ್ದಿ ನೀಡಿದೆ. ಅಲ್ಲದೇ, ಉಪಮುಖ್ಯಮಂತ್ರಿಯಾಗಿ ಮುಂದುವರೆಸುವುದಾಗಿ ಅಭಯ ನೀಡಿದೆ.
ಲಕ್ಷ್ಮಣ್ ಸವದಿ ಅವರು ಕಳೆದ ಮೂರು ದಿನಗಳಿಂದ ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇದಕ್ಕೂ ಮುನ್ನ ಬೆಂಗಳೂರಿನಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ, ಸಿಎಂ ಯಡಿಯೂರಪ್ಪ ಅವರು ವಿಧಾನಪರಿಷತ್ ಗೆ ಆಯ್ಕೆ ಮಾಡುವುದಾಗಿ ತಿಳಿಸಿದ್ದರು. ಲಕ್ಷ್ಮಣ್ ಸವದಿ ಅವರು ಡಿಸಿಎಂ ಆಗಿ ಮುಂದುವರೆಯಬೇಕಾದರೆ ಫೆಬ್ರವರಿಯೊಳಗೆ ಶಾಸನಸಭೆಗೆ ಆಯ್ಕೆಯಾಗಲೇ ಬೇಕಾದ ಅನಿವಾರ್ಯತೆ ಇದೆ. ಇನ್ನು ಕಾಂಗ್ರೆಸ್ ನ ರಿಜ್ವಾನ್ ಅರ್ಷದ್ ಶಾಸಕರಾಗಿ ಆಯ್ಕೆಯಾಗಿರುವ ಕಾರಣ ವಿಧಾನ ಪರಿಷತ್ ನಲ್ಲಿ ಒಂದು ಸ್ಥಾನ ತೆರವಾಗಿದೆ. ಈ ಸ್ಥಾನಕ್ಕೆ ಲಕ್ಷ್ಮಣ್ ಸವದಿ ಆಯ್ಕೆ ಮಾಡಲು ಬಿಜೆಪಿ ನಿರ್ಧರಿಸಿದೆ ಎನ್ನಲಾಗಿದೆ.
ಇನ್ನು ಯಡಿಯೂರಪ್ಪ ಅವರನ್ನು ಭೇಟಿಯಾದ ಬಳಿಕ ದೆಹಲಿಗೆ ತೆರಳಿದ ಲಕ್ಷ್ಮಣ್ ಸವದಿ ಪಕ್ಷದ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದರು. ಈ ವೇಳೆ, ಅಮಿತ್ ಶಾ ಕೂಡ ಲಕ್ಷ್ಮಣ್ ಸವದಿ ಅವರನ್ನು ಡಿಸಿಎಂ ಆಗಿ ಮುಂದುವರೆಸುವುದಾಗಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ
ಡಿಸಿಎಂ ಲಕ್ಷ್ಮಣ್ ಸವದಿಗೆ 'ಗುಡ್ ನ್ಯೂಸ್'
Reviewed by Space encyclopaedia
on
December 15, 2019
Rating:
No comments: